ಬುಧವಾರ, ಮೇ 13, 2026
ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ):
ಪ್ರತಿ ವರ್ಷ ಆಗಸ್ಟ್ 7 ರಂದು ಆಚರಿಸಲಾಗುವ ‘ರಾಷ್ಟಿçÃಯ ಕೈಮಗ್ಗ ದಿನಾಚರಣೆ' ಅಂಗವಾಗಿ, ಕೈಮಗ್ಗ ನೇಯ್ಗೆ ವೃತ್ತಿಯಲ್ಲಿ ನೈಪುಣ್ಯತೆ ಮತ್ತು ಶ್ರೇಷ್ಠತೆ ಹೊಂದಿರುವ ನೇಕಾರರಿಗೆ ನೀಡಲಾಗುವ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಅರ್ಹ ನೇಕಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಪ್ರಶಸ್ತಿಯು ನಗದು ಬಹುಮಾನ, ನೆನಪಿನ ಕಾಣಿಕೆ, ಶಾಲು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.
*ನಗದು ಬಹುಮಾನದ ವಿವರ:*
ಪ್ರಶಸ್ತಿ ವಿಜೇತರಿಗೆ ವಿವಿಧ ವಿಭಾಗಗಳಲ್ಲಿ ನಗದು ಬಹುಮಾನ ನೀಡಲಾಗುತ್ತದೆ. ರೇಷ್ಮೆ ವಲಯ- ರೂ.25,000(ಪ್ರಥಮ), ರೂ.20,000(ದ್ವಿತೀಯ).
ಹತ್ತಿ ವಲಯ- ರೂ.20,000(ಪ್ರಥಮ), ರೂ.15,000(ದ್ವಿತೀಯ).
ಉಣ್ಣೆ ವಲಯ- ರೂ.15,000(ಪ್ರಥಮ).
*ಅರ್ಹತೆ:*
ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕನಿಷ್ಠ 30 ವರ್ಷ ವಯಸ್ಸನ್ನು ಪೂರೈಸಿರಬೇಕು. ಕೈಮಗ್ಗ ನೇಯ್ಗೆಯಲ್ಲಿ ಸುಮಾರು 10 ವರ್ಷಗಳ ಅನುಭವ ಹೊಂದಿರಬೇಕು. ಪ್ರಶಸ್ತಿಗಾಗಿ ಸಲ್ಲಿಸುವ ಉತ್ಪನ್ನದ ಮಾದರಿಯನ್ನು ಅರ್ಜಿದಾರರೇ ಸ್ವತಃ ತಯಾರಿಸಿರಬೇಕು.
*ಅರ್ಜಿ ಸಲ್ಲಿಸುವ ವಿಧಾನ:*
ಅರ್ಹ ನೇಕಾರರು ಬಳ್ಳಾರಿಯ ಹೊಸ ಜಿಲ್ಲಾಡಳಿತ ಭವನದ ‘ಎ' ಬ್ಲಾಕ್ನಲ್ಲಿರುವ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ (ಕೊಠಡಿ ಸಂಖ್ಯೆ 29, 1ನೇ ಮಹಡಿ) ಭೇಟಿ ನೀಡಿ ಅರ್ಜಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮೇ 25 ರೊಳಗಾಗಿ ಸಲ್ಲಿಸತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.08392-266075 ಅಥವಾ ಮೊ.9901313417, 9844837264 ಅನ್ನು ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ