ಸೋಮವಾರ, ಮೇ 4, 2026

ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ನೀಡಲು ಭೂ ಮಾಲೀಕರಿಂದ ಅರ್ಜಿ ಆಹ್ವಾನ

ಬಳ್ಳಾರಿ,ಮೇ 04(ಕರ್ನಾಟಕ ವಾರ್ತೆ): ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಕಚೇರಿ ವತಿಯಿಂದ ‘ಭೂ ಒಡೆತನ ಯೋಜನೆ'ಯಡಿ ಪರಿಶಿಷ್ಟ ಪಂಗಡದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನಿನ ಸೌಲಭ್ಯ ಕಲ್ಪಿಸಲು ಇತರ ಜನಾಂಗದವರಿAದ ಜಮೀನನ್ನು ಖರೀದಿಸಲು ಉದ್ದೇಶಿಸಲಾಗಿದ್ದು, ಆಸಕ್ತ ಭೂ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಜಮೀನನ್ನು ಹೊರತುಪಡಿಸಿ, ಇತರ ಜನಾಂಗದವರಿAದ ಮಾತ್ರ ಜಮೀನನ್ನು ಖರೀದಿಸಲಾಗುತ್ತದೆ. ಜಮೀನು ನೀಡಲು ಆಸಕ್ತಿ ಇರುವ ಮಾಲೀಕರು ನಿಗಮಕ್ಕೆ ಒಪ್ಪಿಗೆ ಪತ್ರವನ್ನು ಸಲ್ಲಿಸಬಹುದಾಗಿದೆ. ಆಸಕ್ತ ಭೂ ಮಾಲೀಕರು ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆAಟ್ ಪ್ರದೇಶದ ನಂದಿ ಕಾಲೋನಿಯ 1ನೇ ಕ್ರಾಸ್ ನ ನಂದಿ ಶಾಲೆ ಹಿಂಭಾಗದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.08392-245551, ಮೊ.9886618721 ಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ