ಮಂಗಳವಾರ, ಮೇ 5, 2026
ಯುವಕ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ಮೇ 04(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕಿನ ಮಾಳಪುರ ಗ್ರಾಮದ ಕುಂಬಾರ ಕೇರಿಯ ಎಸ್.ವಿ ಶ್ರೀಕಾಂತ ಎನ್ನುವ 19 ವರ್ಷದ ಯುವಕ ತೋರಣಗಲ್ಲಿನ ಜಿಂದಾಲ್ ಕಾರ್ಖಾನೆಯ ಎಲ್ಎನ್ಟಿ ಕಂಪನಿಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದು, ಏ.05 ರಂದು ಕೆಲಸಕ್ಕೆ ಹೋಗಿಬರುವುದಾಗಿ ಹೇಳಿ ಪುನಃ ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ ಗುರುತು: ಎತ್ತರ 5.6 ಅಡಿ, ಕೋಲು ಮುಖ, ಗೋಧಿ ಮೈ ಬಣ್ಣ, ಸಾಧಾರಣ ಮೈ ಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಅಂಗಿ, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ಹಿಂದಿ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ.
ಕಾಣೆಯಾದ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, ಬಳ್ಳಾರಿ ಎಸ್.ಪಿ ಅವರ ಕಚೇರಿ ದೂ.08392-258300, ತೋರಣಗಲ್ಲು ಡಿವೈಎಸ್ಪಿ ದೂ.9480803010, ಸಂಡೂರು ವೃತ್ತ ಸಿ.ಪಿ.ಐ ದೂ.08395-260100, 9480803036, ತೋರಣಗಲ್ಲು ಪೊಲೀಸ್ ಠಾಣೆ ದೂ.08395-250100, ಮೊ.9480803062 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ