ಶನಿವಾರ, ಮೇ 2, 2026
ಬಳ್ಳಾರಿ: ಸರ್ಕಾರಿ ಕಿವುಡು ಮಕ್ಕಳ ವಸತಿಯುತ ಶಾಲೆಗೆ ಉಚಿತ ದಾಖಲಾತಿ ಪ್ರಾರಂಭ
ಬಳ್ಳಾರಿ,ಮೇ 02(ಕರ್ನಾಟಕ ವಾರ್ತೆ):
ನಗರದ ಕಂಟೋನ್ಮೆAಟ್ ಪ್ರದೇಶದ ಶಾಂತಿಧಾಮ ಆವರಣದಲ್ಲಿರುವ ಸರ್ಕಾರಿ ಕಿವುಡು ಮಕ್ಕಳ ವಸತಿಯುತ ಪಾಠಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ 1ರಿಂದ 10ನೇ ತರಗತಿಯವರೆಗೆ ಶ್ರವಣದೋಷವುಳ್ಳ ಬಾಲಕರಿಗೆ ಉಚಿತ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ.
*ಅರ್ಹತೆ:*
6 ವರ್ಷದಿಂದ 14 ವರ್ಷದೊಳಗಿನ ಶ್ರವಣದೋಷವುಳ್ಳ ಮಕ್ಕಳು ಪ್ರವೇಶ ಪಡೆಯಬಹುದು. ಕೇವಲ ಬಾಲಕರಿಗೆ ಮಾತ್ರ ಈ ಶಾಲೆಯಲ್ಲಿ ಅವಕಾಶವಿರುತ್ತದೆ. ವಸತಿ ಮತ್ತು ಊಟ, ಶಿಕ್ಷಣ, ವಿಶೇಷ ಶಿಕ್ಷಕರಿಂದ ವಿಷಯ ಬೋಧನೆ, ಪಠ್ಯಪುಸ್ತಕ ಹಾಗೂ ಸಮವಸ್ತç, ಮಾತಿನ ತರಬೇತಿ, ಶ್ರವಣ ತರಬೇತಿ, ಭಾಷಾ ಕಲಿಕೆ ಮತ್ತು ಕಂಪ್ಯೂಟರ್ ಶಿಕ್ಷಣ, ಸ್ಮಾರ್ಟ್ ಕ್ಲಾಸ್ ಮತ್ತು ಸೈನ್ಸ್ ಲ್ಯಾಬ್ ಸೌಲಭ್ಯ, ಪಥಸಂಚಲನ, ಸಾಮೂಹಿಕ ನೃತ್ಯ, ಕ್ರೀಡೆ ಹಾಗೂ ವಿವಿಧ ಸಾಂಸ್ಕೃತಿಕ ಸಹಪಠ್ಯ ಚಟುವಟಿಕೆಗಳ ತರಬೇತಿ ಸೇರಿದಂತೆ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ಉಚಿತವಾಗಿ ಮೇಲ್ಕಂಡ ಸೌಲಭ್ಯಗಳನ್ನು ನೀಡಲಾಗುವುದು.
ಅರ್ಜಿಗೆ ಬೇಕಾಗಿರುವ ದಾಖಲೆಗಳು:
ಜಾತಿ ಮತ್ತು ಆದಾಯ ಪ್ರಮಾಣಪತ್ರ, ಜನ್ಮ ದಿನಾಂಕ ಪ್ರಮಾಣಪತ್ರ, ವಿದ್ಯಾರ್ಥಿ ಹಾಗೂ ತಂದೆ-ತಾಯಿಯ ಆಧಾರ್ ಕಾರ್ಡ್ ಪ್ರತಿ, ಅಂಗವಿಕಲ ಪ್ರಮಾಣ ಪತ್ರ ಹಾಗೂ ಯು.ಡಿ.ಐ.ಡಿ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪ್ರತಿ.
ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್ಮೆAಟ್ ಪ್ರದೇಶದ ಶಾಂತಿಧಾಮ ಆವರಣದಲ್ಲಿರುವ ಸರ್ಕಾರಿ ಕಿವುಡು ಮಕ್ಕಳ ಪಾಠಶಾಲೆಯ ಅಧೀಕ್ಷಕರ ಕಚೇರಿ ಅಥವಾ ದೂ.08392-297138, ಮೊ.9008485380, 9902106670 ಗೆ ಸಂಪರ್ಕಿಸಬಹುದಾಗಿದೆ ಎಂದು ಸೂಚಿಸಿದೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ