ಮಂಗಳವಾರ, ಮೇ 5, 2026

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಮೇ 05(ಕರ್ನಾಟಕ ವಾರ್ತೆ): ಕುರುಗೋಡು ಪಟ್ಟಣದ 17 ನೇ ವಾರ್ಡ್ ನ ಹರಿಕೃಪ ಕಾಲೋನಿಯ ನಿವಾಸಿಯಾದ ಜಗದೀಶ ಎನ್ನುವ 48 ವರ್ಷದ ವ್ಯಕ್ತಿಯು ವಾಹನ ಚಾಲಕ ಕೆಲಸ ಮಾಡಿಕೊಂಡಿದ್ದು, 2017 ರ ನ.24 ರಂದು ಮನೆಯಿಂದ ಹೊರಗಡೆ ಹೋಗಿಬರುತ್ತೇನೆ ಎಂದು ಹೇಳಿಹೋದವನು ಮರಳಿ ಬಾರದೇ ಕಾಣೆಯಾಗಿರುತ್ತಾನೆ. ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ. ವ್ಯಕ್ತಿಯ ಚಹರೆ ಗುರುತು: ಎತ್ತರ 4.8 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಕ್ರಿಮ್ ಬಣ್ಣದ ಅಂಗಿ ಮತ್ತು ಗ್ರೇ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಾನೆ. ಕಾಣೆಯಾದ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕುರುಗೋಡು ಪೊಲೀಸ್ ಠಾಣೆಯ ದೂ.08393-263433 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ