ಶನಿವಾರ, ಜೂನ್ 6, 2026
ಸಾರಿಗೆ ಇಲಾಖೆ: ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ
ಬಳ್ಳಾರಿ,ಜು.06(ಕರ್ನಾಟಕ ವಾರ್ತೆ):
ಸಾರಿಗೆ ಇಲಾಖೆಯಲ್ಲಿ 1991ರ ಏಪ್ರಿಲ್ 01 ರಿಂದ 2022ರ ಮಾರ್ಚ್ 31 ರ ಅವಧಿಯಲ್ಲಿ ದಾಖಲಾಗಿರುವ ಪ್ರಕರಣಗಳ ದಂಡ ಪಾವತಿಯ ಮೇಲೆ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ.
ಪಾವತಿದಾರರಿಗೆ ಜೂನ್ 06 ರಿಂದ ಜುಲೈ 10 ರ ವರೆಗೆ ಕಾಲಾವಕಾಶ ನೀಡಲಾಗಿದ್ದು, ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವಾಹನ ಮಾಲೀಕರು ರಿಯಾಯಿತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ