ಗುರುವಾರ, ಜೂನ್ 18, 2026
ವ್ಯಕ್ತಿ ಕಾಣೆ ಪತ್ತೆಗೆ ಮನವಿ
ಬಳ್ಳಾರಿ,ಜೂ.18(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕಿನ ಹಿರೆಕೆರೆಯಾಗಿನಹಳ್ಳಿ ಗ್ರಾಮದ ಮಹೇಶ್.ಹೆಚ್ ಎನ್ನುವ 34 ವರ್ಷದ ವ್ಯಕ್ತಿಯು 2021 ರ ಜೂ.10 ರಂದು ಧಾರವಾಡಕ್ಕೆ ಹೋಗುವುದಾಗಿ ಹೇಳಿ ಪುನ: ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪಿಎಸ್ಐ ಮನವಿ ಮಾಡಿದ್ದಾರೆ.
*ಚಹರೆ ಗುರುತು:*
ಅಂದಾಜು 5.5 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿರುತ್ತಾನೆ. ಕನ್ನಡ, ತೆಲುಗು, ಹಿಂದಿ, ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾನೆ.
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಚೋರನೂರು ಪೊಲೀಸ್ ಠಾಣೆಯ ದೂ.08395-295100, ಪಿಎಸ್ಐ ಮೊ.9480803063, ಸಂಡೂರು ಸಿಪಿಐ ದೂ.08395-260100, ಅಥವಾ ಬಳ್ಳಾರಿ ಎಸ್.ಪಿ. ಕಚೇರಿ ದೂ.08392-258400 ಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ