ಬುಧವಾರ, ಜೂನ್ 10, 2026
ಬಳ್ಳಾರಿಯಲ್ಲಿ ರಾಷ್ಟಿçÃಯ ಶಸ್ತçಚಿಕಿತ್ಸಕರ ಸಾಪ್ತಾಹಿಕ ಆಚರಣೆ: ವೈದ್ಯಕೀಯ ವಿದ್ಯಾರ್ಥಿಗಳಿಂದ ಹೃದಯದ ಆರೋಗ್ಯ ಜಾಗೃತಿ ಬೀದಿ ನಾಟಕ ಪ್ರದರ್ಶನ
ಬಳ್ಳಾರಿ,ಜೂ.09(ಕರ್ನಾಟಕ ವಾರ್ತೆ):
ರಾಷ್ಟಿçÃಯ ಶಸ್ತçಚಿಕಿತ್ಸಕರ ಸಾಪ್ತಾಹಿಕ ಆಚರಣೆ ಅಂಗವಾಗಿ ಮಂಗಳವಾರ ನಗರದ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ (ಬಿಎಂಸಿಆರ್ಸಿ) ಆವರಣದ ತುರ್ತು ಚಿಕಿತ್ಸಾ ವಿಭಾಗದ ಮುಂಭಾಗದಲ್ಲಿ ಭಾರತೀಯ ಶಸ್ತçಚಿಕಿತ್ಸಕರ ಸಂಘದ ಕರ್ನಾಟಕ ರಾಜ್ಯ ಭಾಗದ - ಬಳ್ಳಾರಿ ಶಾಖೆಯ ವತಿಯಿಂದ ಅರ್ಥಪೂರ್ಣ ಬೀದಿ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು.
ಸಾರ್ವಜನಿಕರಲ್ಲಿ ಹೃದಯದ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಮಹತ್ತರ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಇಂಟರ್ನ್ಸ್ ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳು ಅತ್ಯಂತ ಯಶಸ್ವಿಯಾಗಿ ಬೀದಿ ನಾಟಕವನ್ನು ಪ್ರದರ್ಶಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದರು.
ವಿದ್ಯಾರ್ಥಿಗಳ ಈ ಸಾಮಾಜಿಕ ಕಳಕಳಿ ಮತ್ತು ಸಾರ್ವಜನಿಕ ಆರೋಗ್ಯದ ಬಗ್ಗೆ ತೋರಿದ ಬದ್ಧತೆಯನ್ನು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹಿರಿಯ ವೈದ್ಯರಾದ ಡಾ.ಶೇಕಪ್ಪ ಸಿ. ಮಳಗಿಮನಿ, ಡಾ.ಮಹೇಶ್ ಎಸ್. ದೇಸಾಯಿ, ಡಾ. ರಾಜಶೇಖರ ಗೌಡ ಹಾಗೂ ಡಾ. ಶೈಖ್ ಫರ್ಹಾನ್ ಎಂ.ಬಿ ಅವರು ಮುಕ್ತಕಂಠದಿAದ ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಕೆಎಸ್ಸಿಎಎಸ್ಐ - ಬಳ್ಳಾರಿ ಶಾಖೆಯ ಅಧ್ಯಕ್ಷ ಡಾ.ಶೇಕಪ್ಪ ಮಾಳಗಿಮನಿ, ಕಾರ್ಯದರ್ಶಿ ಡಾ.ಗುಡೇಕೋಟೆ ರವಿಕುಮಾರ, ಜಂಟಿ ಕಾರ್ಯದರ್ಶಿ ಡಾ.ಶೈಖ್ ಫರ್ಹಾನ್ ಎಂ.ಬಿ., ಎಎಸ್ಐ ರಾಷ್ಟಿçÃಯ ಕಾರ್ಯದರ್ಶಿ ಡಾ.ದಿವಾಕರ್ ಗಡ್ಡಿ ಹಾಗೂ ಕೆಎಸ್ಸಿಎಎಸ್ಐ ಖಜಾಂಚಿ ಡಾ.ವೈ.ಗುರುಬಸವನ ಗೌಡ ಸೇರಿದಂತೆ ಶಸ್ತçಚಿಕಿತ್ಸಾ ವಿಭಾಗದ ಉಪನ್ಯಾಸಕರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ತುರ್ತು ಚಿಕಿತ್ಸಾ ವಿಭಾಗಕ್ಕೆ ಆಗಮಿಸಿದ್ದ ನೂರಾರು ಸಾರ್ವಜನಿಕರು ಶಾಂತಚಿತ್ತರಾಗಿ ಬೀದಿ ನಾಟಕವನ್ನು ವೀಕ್ಷಿಸಿದರು. ವಿದ್ಯಾರ್ಥಿಗಳ ಅಭಿನಯ ಹಾಗೂ ಸಂದೇಶಕ್ಕೆ ಚಪ್ಪಾಳೆಗಳ ಮುಖಾಂತರ ಭಾರಿ ಪ್ರಶಂಸೆ ವ್ಯಕ್ತಪಡಿಸಿದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ